ವೈದ್ಯರ ಪ್ರತಿಭಟನೆ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

Update: 2019-11-06 16:22 GMT

ಬೆಂಗಳೂರು, ನ.6: ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರು ಪ್ರತಿಭಟನೆ ನಡೆಸುತ್ತಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಾಗಿದೆ.
   
ಕೆ.ಎಚ್.ದೇವಿಪ್ರಸಾದ್ ರೈ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಮಿಂಟೋ ಆಸ್ಪತ್ರೆಯ ವೈದ್ಯರ ಪ್ರತಿಭಟನೆಯಿಂದ ರೋಗಿಗಳು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಹೀಗಾಗಿ, ಈ ಕೂಡಲೆ ಇವರ ವಿರುದ್ಧ ಎಸ್ಮಾ ಜಾರಿಗೊಳಿಸಲು ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಶುಕ್ರವಾರ ಅರ್ಜಿ ವಿಚಾರಣೆಗೆ ಬರುವ ಸಂಭವವಿದೆ. ಕನ್ನಡ ರಾಜ್ಯೋತ್ಸವದ ದಿನದಂದು ಮಿಂಟೋ ಆಸ್ಪತ್ರೆಗೆ ನುಗ್ಗಿ ಗಲಾಟೆ ಮಾಡಿ ಕೆಲ ವೈದ್ಯರ ಮೇಲೆ ಹಲ್ಲೆ ಎಸಗಿತ್ತೆನ್ನಲಾದ ಕರವೇ ವಿರುದ್ಧ ವೈದ್ಯರು ಪ್ರತಿಭಟನೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News