ಪಿಎಸ್ಸೈ ನೇಮಕಾತಿ ಹೆಸರಿನಲ್ಲಿ ವಂಚನೆ: ದೂರು

Update: 2019-11-06 17:05 GMT

ಬೆಂಗಳೂರು, ನ.6: ಪಿಎಸ್ಸೈ ನೇಮಕಾತಿ ಸಂಬಂಧ ಲಕ್ಷಾಂತರ ರೂಪಾಯಿ ವಂಚಿಸಿದ ಆರೋಪದ ಮೇಲೆ ಇಲ್ಲಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದಾಸರಹಳ್ಳಿ ನಿವಾಸಿಯಾಗಿರುವ ಯುವತಿಯೊಬ್ಬಾಕೆ, 2016ನೇ ಸಾಲಿನ ಪಿಎಸ್ಸೈ ನೇಮಕಾತಿ ಸಂಬಂಧ ದೇಹದಾರ್ಢ್ಯ ಪರೀಕ್ಷೆಯಲ್ಲಿ ಉತ್ತೀರ್ಣವಾಗಿದ್ದರು. ಇದನ್ನು ತಿಳಿದ ದೇವಿಪ್ರಸಾದ್ ಎಂಬಾತ ತನ್ನ ಸ್ನೇಹಿತರೊಂದಿಗೆ ಜೊತೆಗೆ, ಯುವತಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ, 3.50 ಲಕ್ಷ ರೂ. ವಸೂಲಿ ಮಾಡಿದ್ದಾನೆ ಎನ್ನಲಾಗಿದೆ.

ಈ ಬಗ್ಗೆ ವಂಚನೆ ಬೆಳಕಿಗೆ ಬಂದ ಬಳಿಕ, ಯುವತಿ ಹಣ ವಾಪಸ್ಸು ನೀಡುವಂತೆ ಕೇಳಿದಾಗ, ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಈ ಬಗ್ಗೆ ಬಾಗಲಗುಂಟೆ ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News