ಕರ್ನಾಟಕ ಹೈಕೋರ್ಟ್ಗೆ ಐವರು ನೂತನ ನ್ಯಾಯಮೂರ್ತಿಗಳ ನೇಮಕ
Update: 2019-11-07 14:08 GMT
ಬೆಂಗಳೂರು, ನ.7: ಕರ್ನಾಟಕ ಹೈಕೋರ್ಟ್ಗೆ ಐವರು ನೂತನ ಹಂಗಾಮಿ ನ್ಯಾಯಮೂರ್ತಿಗಳನ್ನು ನೇಮಿಸಿ ಕೇಂದ್ರ ಕಾನೂನು ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ.
ಕರ್ನಾಟಕ ಹೈಕೋರ್ಟ್ ವಕೀಲ ವೃಂದದಿಂದ ಎನ್.ಎಸ್.ಸಂಜಯಗೌಡ, ಜ್ಯೋತಿ ಮೂಲಿಮನಿ, ಆರ್.ನಟರಾಜ್, ಹೇಮಂತ್ ಚಂದನಗೌಡರ್ ಹಾಗೂ ಪ್ರದೀಪ್ ಸಿಂಗ ಯೆರೂರು ಇವರನ್ನು ಕರ್ನಾಟಕ ಹೈಕೋರ್ಟ್ ಹಂಗಾಮಿ ನ್ಯಾಯಮೂತಿಗರ್ಳನ್ನಾಗಿ ನೇಮಕ ಮಾಡಲಾಗಿದೆ.
ಅ.5ರಂದು ಈ ಐವರು ನ್ಯಾಯಮೂರ್ತಿಗಳು ಸೇರಿ ಒಟ್ಟು ಎಂಟು ವಕೀಲರ ಹೆಸರನ್ನು ಕೇಂದ್ರ ಸರಕಾರಕ್ಕೆ ಕೊಲಿಜಿಯಂ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಐವರನ್ನು ಮಾತ್ರ ನೇಮಕ ಮಾಡಿದೆ.