ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-11-07 17:01 GMT

ಅಮಾಸೆಬೈಲು, ನ.7: ವಿಪರೀತ ಅಮಲು ಪದಾರ್ಥ ಸೇವಿಸುವ ಚಟ ಹೊಂದಿದ್ದ ಮಡಾಮಕ್ಕಿ ಹಡೋಲ್‌ಬೈಲ್ ನಿವಾಸಿ ಸದಾಶಿವ ಆಚಾರಿ(40) ಎಂಬವರು ಜೀವನದಲ್ಲಿ ಜಿಗುಪ್ಸಗೊಂಡು ನ.6ರಂದು ರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯಡ್ತರೆ ಗ್ರಾಮದ ಬಂಕೇಶ್ವರ ದಾಸನಬೆಟ್ಟು ನಿವಾಸಿ ಶಿವಯ್ಯ ಪೂಜಾರಿ(45) ಎಂಬವರು ಜೀವನ ದಲ್ಲಿ ಜಿಗುಪ್ಸೆ ಹೊಂದಿ ನ.6ರಂದು ರಾತ್ರಿ ವೇಳೆ ಮನೆಯ ಹಿತ್ತಲಿನಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News