ನ.8ರಂದು ದ.ಕ. ಜಿಲ್ಲೆಯಲ್ಲೂ ಒಪಿಡಿ ಬಂದ್

Update: 2019-11-07 18:10 GMT

ಮಂಗಳೂರು, ನ.7: ಬೆಂಗಳೂರಿನ ಮಿಂಟೊ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಜಿಲ್ಲೆಯ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲು ಮನವಿ ಮಾಡಲಾಗಿದೆ ಎಂದು ಐಎಂಎ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ತಿಳಿಸಿದ್ದಾರೆ.

ನ.8ರಂದು ಬೆಳಗ್ಗೆ 6 ರಿಂದ ನ.9ರಂದು ಬೆಳಗ್ಗೆ 6 ಗಂಟೆವರೆಗೆ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿ ಐಎಂಎ ನಡೆಸುವ ಪ್ರತಿಭಟನೆಗೆ ಬೆಂಬಲ ನೀಡಲು ಕೋರಲಾಗಿದೆ. ಕರ್ತವ್ಯ ನಿರತ ವೈದ್ಯರ ಮೇಲೆ ನಡೆಯುವ ಇಂತಹ ಮಾನಸಿಕ, ದೈಹಿಕ ದೌರ್ಜನ್ಯಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಈ ರೀತಿಯ ಘಟನೆಗಳು ಪುನಃ ನಡೆಯದಂತೆ ವೈದ್ಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಿರಿಯ ವೈದ್ಯ ವಿದ್ಯಾರ್ಥಿಗಳ ಹಿತಕ್ಕಾಗಿ ಐಎಂಎ ರಾಜ್ಯ ಶಾಖೆ ತೆಗೆದುಕೊಳ್ಳುವ ತೀರ್ಮಾನಕ್ಕೆ ಮಂಗಳೂರು ಶಾಖೆ ಬೆಂಬಲ ನೀಡುತ್ತಿದೆ. ಸರಕಾರ ಕೂಡಲೇ ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಐಎಂಎ ಮಂಗಳೂರು ಶಾಖೆಯ ಅಧ್ಯಕ್ಷ ಅಣ್ಣಯ್ಯ ಕುಲಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News