ಅಯೋಧ್ಯೆ ತೀರ್ಪು ಹಿನ್ನೆಲೆ: ಶಾಂತಿ-ಸೌಹಾರ್ದತೆ ಕಾಪಾಡಲು ಕ್ರಮ- ಗೃಹ ಸಚಿವ ಬೊಮ್ಮಾಯಿ
Update: 2019-11-08 14:03 GMT
ಬೆಂಗಳೂರು, ನ.8: ರಾಮ ಜನ್ಮಭೂಮಿ, ಬಾಬರಿ ಮಸೀದಿ ವಿವಾದ ಸಂಬಂಧ ಶೀಘ್ರದಲ್ಲಿಯೇ ತೀರ್ಪು ಪ್ರಕರಣ ಹಿನ್ನೆಲೆ ರಾಜ್ಯದೆಲ್ಲೆಡೆ ಶಾಂತಿ-ಸೌಹಾರ್ದತೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜು ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೀರ್ಪು ಯಾರ ಪರ, ವಿರುದ್ಧವೂ ಇರಲಿ. ಶಾಂತಿ-ಸೌಹಾರ್ದ ಕಾಪಾಡುವ ಸಂಬಂಧ ಈಗಾಗಲೇ ಶಾಂತಿ ಪಾಲನಾ ಸಭೆಗಳನ್ನು ನಡೆಸಲಾಗಿದೆ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಮಾಹಿತಿ ನೀಡಿದರು.
ತೀರ್ಪು ಬಳಿಕ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯುವುದಿಲ್ಲ ಎನ್ನುವ ವಿಶ್ವಾಸ ಇದೆ ಎಂದ ಅವರು, ಸಮಾಜಘಾತುಕ ವ್ಯಕ್ತಿಗಳ ಮೇಲೂ ನಿಗಾ ಇಟ್ಟಿದ್ದೇವೆ. ಶಾಂತಿ-ಸೌಹಾರ್ದತೆ ಕಾಪಾಡಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವುದಾಗಿ ಹೇಳಿದರು.