ಮತ ಚಲಾಯಿಸುವ ಅರ್ಹ ಕಾರ್ಮಿಕರಿಗೆ ವೇತನ ಸಹಿತ ರಜೆ

Update: 2019-11-08 17:20 GMT

ಮಂಗಳೂರು, ನ.8: ರಾಜ್ಯ ಚುನಾವಣಾ ಆಯೋಗವು ದ.ಕ. ಜಿಲ್ಲೆಯಲ್ಲಿ ನ.12ರಂದು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಿಗದಿಪಡಿಸಿದೆ. ಚುನಾವಣೆ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯ ನೋಂದಾಯಿತ ಕಾರ್ಮಿಕರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಒಂದು ದಿನ ವೇತನ ಸಹಿತ ರಜೆ ನೀಡಿ ಆದೇಶ ಹೊರಡಿಸಲಾಗಿದೆ.

ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಮತ ಚಲಾಯಿಸುವ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಹಾಗೂ ಇತರ ಸಂಸ್ಥೆಗಳ ಮಾಲಕರು ತಮ್ಮ ಕಾರ್ಮಿಕರಿಗೆ ನ.12ರಂದು ಒಂದು ದಿನದ ವೇತನ ಸಹಿತ ರಜೆಯನ್ನು ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಅನುವು ಮಾಡಿಕೊಡಲು ಸೂಚಿಸಲಾಗಿದೆ.

ಈ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಪ್ಪಿದಲ್ಲಿ ಸಂಬಂಧಪಟ್ಟ ಸಂಸ್ಥೆಗಳ ವಿರುದ್ದ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News