ಸುಪ್ರೀಂ ಕೋರ್ಟ್ ತೀರ್ಪುನ್ನು ಎಲ್ಲರೂ ಸ್ವಾಗತಿಸಿದ್ದಾರೆ: ಶಾಸಕಿ ಖನೀಝ್ ಫಾತಿಮಾ
Update: 2019-11-09 17:11 GMT
ಕಲಬುರಗಿ, ನ.9: ರಾಮಜನ್ಮ ಭೂಮಿ ಮತ್ತು ಬಾಬರಿ ಮಸೀದಿ ಭೂ ವಿವಾದ ಸಂಬಂಧ ತೀರ್ಪು ಪ್ರಕಟವಾಗಿದ್ದು, ಈ ಸಂಬಂಧ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ಜತೆಗಿದ್ದು, ಅವರ ಅಭಿಪ್ರಾಯಕ್ಕೆ ಸಹಮತವಿದೆ ಎಂದು ಕಾಂಗ್ರೆಸ್ ಶಾಸಕಿ ಖನೀಝ್ ಫಾತಿಮಾ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪುನ್ನು ಎಲ್ಲರೂ ಸ್ವಾಗತಿಸಿದ್ದಾರೆ. ಈ ವೇಳೆ ಸಂಯಮದಿಂದ ನಡೆದುಕೊಳ್ಳಬೇಕು, ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು ಮನವಿ ಮಾಡಿದರು.
ತೀರ್ಪು ಸಂಬಂಧ ಅಖಿಲ ಭಾರತ ಮುಸ್ಲಿಮ್ ವೈಯಕ್ತಿಕ ಕಾನೂನು ಮಂಡಳಿ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಸಹ ಬದ್ಧವಾಗಿದ್ದೇವೆ ಎಂದ ಅವರು, ತೀರ್ಪು ಹಿನ್ನೆಲೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂದು ಅವರು ಹೇಳಿದರು.