ದಾವಣಗೆರೆ: ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ

Update: 2019-11-09 18:36 GMT
ಸಾಂದರ್ಭಿಕ ಚಿತ್ರ

ದಾವಣಗೆರೆ, ನ.9: ಹರಿಹರದ ಹರಿಹರೇಶ್ವರ ದೇವಸ್ಥಾನದ ರಸ್ತೆಯಲ್ಲಿ ಮೀಲಾದುನ್ನಬಿ ಹಿನ್ನಲೆಯಲ್ಲಿ ಧ್ವಜ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದ ಘಟನೆ ಶನಿವಾರ ನಡೆದಿದೆ.

ಕಟ್ಟಿದ್ದ ಬ್ಯಾನರ್ ಗಳನ್ನು ಪೊಲೀಸರು ತೆಗೆಯಲು ಮುಂದಾದಾಗ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ಘಟನೆ ಶಾಸಕ ರಾಮಪ್ಪ ಅವರ ಸಮ್ಮುಖದಲ್ಲಿ ನಡೆದಿದ್ದು, ಈ ವೇಳೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಅದರೆ ಉದ್ವಿಗ್ನ ವಾತಾವರಣ ಉಂಟಾದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪುನ್ನು ಚದುರಿಸಿದ್ದಾರೆ. ಈಗ ಪರಿಸ್ಥಿತಿ ಶಾಂತವಾಗಿದೆ ಎಂದು ತಿಳಿದುಬಂದಿದೆ. 

ಸ್ಥಳದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News