ನ.12ರಂದು ಉಪ ಚುನಾವಣೆ : ಅವಿರೋಧ ಆಯ್ಕೆ ಕ್ಷೇತ್ರದಲ್ಲಿ ಸಾರ್ವತ್ರಿಕ ರಜೆ ರದ್ದು

Update: 2019-11-10 12:09 GMT

ಉಡುಪಿ, ನ.10: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ತಾಪಂ ಮತ್ತು ಗ್ರಾಪಂ ಕ್ಷೇತ್ರಗಳ ಸದಸ್ಯ ಸ್ಥಾನಗಳಿಗೆ ನ.12ರಂದು ಉಪ ಚುನಾವಣೆ ನಡೆಯಲಿದ್ದು, ಇದರಲ್ಲಿ ಅವಿರೋಧವಾಗಿ ಆಯ್ಕೆಯಾದ ಕ್ಷೇತ್ರ ಗಳಲ್ಲಿ ಸಾರ್ವತ್ರಿಕ ರಜೆಯನ್ನು ರದ್ದುಪಡಿಸಲಾಗಿದೆ.

ಕಟಪಾಡಿ ಗ್ರಾಪಂ ವ್ಯಾಪ್ತಿಯ ಯೇಣಗುಡ್ಡೆ ಮತ್ತು ಕಲ್ಯಾ ಗ್ರಾಪಂ ವ್ಯಾಪ್ತಿಯ ಕಲ್ಯಾ ಪಂಚಾಯತ್‌ನ ಸದಸ್ಯ ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದು, ಈ ಕ್ಷೇತ್ರಗಳಲ್ಲಿ ಚುನಾವಣೆ ನಡೆಯದ ಕಾರಣ ಈ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರಕಾರಿ ಕಚೇರಿಗಳು, ಶಾಲಾ ಕಾಲೇಜುಗಳು(ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳಿಗೆ, ನ.12ರಂದು ಸಾರ್ವತ್ರಿಕ ರಜೆ ಅನ್ವಯಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News