ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಖುರೇಷಿಯವರಿಗೆ ಬಡ್ತಿ

Update: 2019-11-10 12:13 GMT
Photo: www.livelaw.in

ಹೊಸದಿಲ್ಲಿ: ನ್ಯಾಯಮೂರ್ತಿ ಅಕಿಲ್ ಅಬ್ದುಲ್‍ ಹಮೀದ್ ಖುರೇಷಿ ಅವರನ್ನು ತ್ರಿಪುರಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕಾನೂನು ಸಚಿವಾಲಯ ಆದೇಶ ಹೊರಡಿಸಿದೆ.

ರಾಜಸ್ಥಾನ ಹೈಕೋರ್ಟ್‍ನ ನ್ಯಾಯಮೂರ್ತಿ ಮುಹಮ್ಮದ್ ರಫೀಕ್ ಅವರನ್ನು ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲಾಗಿದೆ.

ನ್ಯಾಯಮೂರ್ತಿ ಖುರೇಷಿಯವರನ್ನು ಮಧ್ಯಪ್ರದೇಶ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಶಿಫಾರಸ್ಸು ಮಾಡಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಪ್ರಸ್ತಾವ ಸಲ್ಲಿಸಿತ್ತು. ಆದರೆ ಸರ್ಕಾರ ಇದಕ್ಕೆ ವಿರೋಧಿಸಿದ ಹಿನ್ನೆಲೆಯಲ್ಲಿ ತ್ರಿಪುರಾ ಹೈಕೋರ್ಟ್‍ ಗೆ ನೇಮಕ ಮಾಡುವಂತೆ ಶಿಫಾರಸ್ಸು ಮಾಡಿತ್ತು.

ಗುಜರಾತ್ ಹೈಕೋರ್ಟ್‍ನ ಹಿರಿಯ ನ್ಯಾಯಮೂರ್ತಿ ಖುರೇಷಿಯವರ ನೇಮಕಾತಿಯಲ್ಲಿ ವಿಳಂಬ ಮಾಡುತ್ತಿರುವ ಬಗ್ಗೆ ಅಲ್ಲಿನ ಹೈಕೋರ್ಟ್ ವಕೀಲರ ಸಂಘ ಸುಪ್ರೀಂಕೋರ್ಟ್‍ ಗೆ ಅರ್ಜಿ ಸಲ್ಲಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News