ತುಂಬೆ: ಮುಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಮೀಲಾದುನ್ನಬಿ

Update: 2019-11-10 15:59 GMT

ಮಂಗಳೂರು: ಮುಹಿಯುದ್ದೀನ್ ಜುಮಾ ಮಸೀದಿ ತುಂಬೆ ಹಾಗೂ ಹಯಾತುಲ್ ಇಸ್ಲಾಂ ಮದ್ರಸ ತುಂಬೆ ಇದರ ಆಶ್ರಯದಲ್ಲಿ ಮೀಲಾದುನ್ನಬಿ ಪ್ರಯುಕ್ತ ಮೆರವಣಿಗೆ ನಡೆಯಿತು.

 ಜಾಥಾವನ್ನು ತುಂಬೆ ಮುಹಿಯುದ್ದೀನ್ ಜುಮಾ ಮಸೀದಿಯ ಖತೀಬ್ ಅಬ್ದುಲ್ ಲತೀಫ್ ಪೈಝಿ ಧ್ವಜಾರೋಹಣ ಮಾಡುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಇಂತಿಯಾಝ್ ಆಲ್ಫಾ , ಕೋಶಾಧಿಕಾರಿ ಟಿ.ಕೆ ಶರೀಫ್, ಕಮಿಟಿಯ ಸರ್ವ ಸದಸ್ಯರು, ಮದ್ರಸ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

ಕಾರ್ಯದರ್ಶಿ ಟಿ. ಮೂಸಬ್ಬ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ರಶೀದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News