ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಬಿದ್ದು ಕಾರ್ಮಿಕ ಸಾವು: ನ್ಯಾಯಕ್ಕಾಗಿ ಪೋಷಕರ ಪ್ರತಿಭಟನೆ

Update: 2019-11-10 17:28 GMT

ಬೆಂಗಳೂರು, ನ.10: ನಮ್ಮ ಮೆಟ್ರೋ ಕಾಮಗಾರಿ ವೇಳೆ ಕ್ರೇನ್ ಬಿದ್ದು ಬಿಹಾರ ಮೂಲದ ಕಾರ್ಮಿಕನೊರ್ವ ಮೃತಪಟ್ಟಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನ. 8ರಂದು ಈ ಘಟನೆ ಸಂಭವಿಸಿದೆ. ಈಗ ಈ ಪ್ರಕರಣ ಬೆಳಕಿಗೆ ಬಂದಿದ್ದು, ಬಿಎಂಆರ್‌ಸಿಎಲ್ ಈ ಘಟನೆಯನ್ನು ಮುಚ್ಚಿಡಲು ಯತ್ನಿಸಿದೆ ಎನ್ನಲಾಗಿದೆ. ಇನ್ನು ಘಟನೆಯಲ್ಲಿ ಇನ್ನೂ ಮೂವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಪಟ್ಟಂತೆ ನ್ಯಾಯ ಒದಗಿಸುವಂತೆ ಮೃತನ ಪರ ಪೋಷಕರು ಹಾಗೂ ಸಂಬಂಧಿಕರು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News