ಔರಾದ್ಕರ್ ವರದಿ ಅನ್ವಯ ಮುಂದಿನ ತಿಂಗಳು ಹೆಚ್ಚುವರಿ ವೇತನ: ಗೃಹ ಸಚಿವ ಬೊಮ್ಮಾಯಿ

Update: 2019-11-10 17:49 GMT

ಹುಬ್ಬಳ್ಳಿ, ನ.10: ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ವರದಿ ಅನ್ವಯ ಮುಂದಿನ ತಿಂಗಳಿನಿಂದ ಹೆಚ್ಚುವರಿ ವೇತನ ಜಾರಿಯಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ರವಿವಾರ ನಗರದ ವಿಮಾನ ನಿಲ್ದಾಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಾದಿತ ಅಯೋಧ್ಯೆ ಭೂಮಿ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ಪ್ರಕಟಿಸಿರುವ ತೀರ್ಪುನ್ನು ಎಲ್ಲರೂ ಒಪ್ಪಿದ್ದು, ಇದರಿಂದ ಎರಡು ಕೋಮುಗಳ ಮಧ್ಯೆ ಇದ್ದ ಆತಂಕ ದೂರವಾಗಿದೆ ಎಂದರು.

ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳ ಮೇಲೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೂ ಪೊಲೀಸರು ನಿಗಾ ಇಟ್ಟಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News