ಶಿವಸೇನೆ ಸರಕಾರಕ್ಕೆ ಬೆಂಬಲ ನೀಡಲು ಸಿದ್ಧ: ಮಹಾರಾಷ್ಟ್ರದ 40 ಕಾಂಗ್ರೆಸ್ ಶಾಸಕರಿಂದ ಸೋನಿಯಾಗೆ ಪತ್ರ

Update: 2019-11-11 11:29 GMT

ಹೊಸದಿಲ್ಲಿ : ಮಹಾರಾಷ್ಟ್ರದ 40 ಮಂದಿ ಕಾಂಗ್ರೆಸ್ ಶಾಸಕರು ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದು ತಾವು ರಾಜ್ಯದಲ್ಲಿ ಶಿವಸೇನೆ ನೇತೃತ್ವದ ಸರಕಾರಕ್ಕೆ ಬೆಂಬಲಿಸಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಮುಖ್ಯವಾಗಿ ಈಗಿನ ಸನ್ನಿವೇಶವನ್ನು ಪರಿಗಣಿಸಿ ಕಾಂಗ್ರೆಸ್ ಪಕ್ಷ ಸರಕಾರವನ್ನು ಬೆಂಬಲಿಸುವ ನಿರ್ಧಾರವನ್ನು ಕೈಗೊಳ್ಳಬೇಕೆಂದು ಅವರು ಬಯಸುತ್ತಿದ್ದಾರೆಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದ ಒಟ್ಟು 288 ನೂತನ ಶಾಸಕರ ಪೈಕಿ 44 ಮಂದಿ ಕಾಂಗ್ರೆಸ್ ಶಾಸಕರಾಗಿದ್ದಾರೆ.  ಸೋಮವಾರ ಬೆಳಗ್ಗೆ ಕೇಂದ್ರದ ಎನ್‍ಡಿಎ ಸರಕಾರದಲ್ಲಿರುವ ಏಕೈಕ ಶಿವಸೇನೆ ಸಚಿವ ಅರವಿಂದ್ ಸಾವಂತ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ  ಈ ಬೆಳವಣಿಗೆ ನಡೆದಿದೆ.

ಸರಕಾರ ರಚನೆ ಸಂಭಾವ್ಯತೆ ಕುರಿತಂತೆ ಸದ್ಯ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಮಾತುಕತೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News