ಮೊಂಟೆಪದವು: ಮೀಲಾದುನ್ನಬಿ ಕಾರ್ಯಕ್ರಮ, ತವಸ್ಸುಲ್ ಯಂಗ್ ಮೆನ್ಸ್ ವತಿಯಿಂದ ಸನ್ಮಾನ

Update: 2019-11-11 12:21 GMT

ಮಂಗಳೂರು, ನ.11: ಮೊಂಟೆಪದವು ಬದ್ರಿಯಾ ಜುಮಾ ಮಸೀದಿ ವತಿಯಿಂದ ಮೀಲಾದುನ್ನಬಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಬಹುಮಾನ ವಿತರಣೆ ಮಾಡಲಾಯಿತು.

ಐದು ಮತ್ತು ಏಳನೇ ತರಗತಿಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 'ಪ್ರತಿಭಾ ಪುರಸ್ಕಾರ' ನೀಡಿ ಪ್ರೋತ್ಸಾಹಿಸಲಾಯಿತು. ಅಲ್ಲದೇ, ಬದ್ರಿಯಾ ಜುಮಾ ಮಸೀದಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಅಬ್ದುಲ್ ಖಾದರ್ ಹಾಗೂ ಕಳೆದ ನಾಲ್ಕೈದು ವರ್ಷಗಳಿಂದ ಪ್ರೆಂಡ್ಸ್ ಮೊಂಟಪದವು ಹಮ್ಮಿಕೊಳ್ಳುವಂತಹ ಕಾರ್ಯಕ್ರಮದ ನೇತೃತ್ವ ವಹಿಸುತ್ತಿರುವ ಶಂಸುದ್ದೀನ್ ಯು.ಟಿ ಅವರನ್ನು ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News