ಶರತ್‌ ಬಚ್ಛೇಗೌಡ ಪಕ್ಷೇತರರಾಗಿ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸಲ್ಲ: ಡಿಸಿಎಂ ಅಶ್ವಥ್ ನಾರಾಯಣ

Update: 2019-11-11 16:12 GMT

ಚಿಕ್ಕಮಗಳೂರು, ನ.11: ಉಪಚುನಾವಣೆಗೆ ಸಜ್ಜಾಗಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವಥ್ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ 'ಸೈನ್ಸ್‌ ಸಿಟಿ' ಜಾಗದ ಪರಿಶೀಲನೆ ಹಾಗೂ ಪಕ್ಷದ ಕಚೇರಿಗೆ ಭೇಟಿ ನೀಡಿದ ನಂತರ ಮಾಧ್ಯಮದವರ ಜತೆ ಸೋಮವಾರ ಅವರು ಮಾತನಾಡಿದರು.

"ಶರತ್‌ ಬಚ್ಛೇಗೌಡ ಅವರ ಜೊತೆ ಮಾತುಕತೆ ನಡೆಸುತ್ತೇವೆ. ಅವರು ನಮ್ಮವರು. ಮಾತುಕತೆ ನಡೆಸಿ ಅವರ ಮನವೊಲಿಸುತ್ತೇವೆ. ಅವರನ್ನು ಜತೆ ಕರೆದುಕೊಂಡು ಹೋಗುತ್ತೇವೆ. ಯಾವುದೇ ಸಮಸ್ಯೆ ಇಲ್ಲ, ಹಾಗಾಗಿ, ಪಕ್ಷೇತರರಾಗಿ ಸ್ಪರ್ಧಿಸುವ ಪ್ರಶ್ನೆಯೇ ಉದ್ಭವಿಸದು," ಎಂದು ಅವರು ಸ್ಪಷ್ಟನೆ ನೀಡಿದರು.

ಬಚ್ಚೇಗೌಡರಿಂದ ಅನ್ಯಾಯ ಆಗಿದೆ ಎಂಬ ಎಂಟಿಬಿ ನಾಗರಾಜ್‌ ಅವರ ಆರೋಪ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, "ಯಾರಿಗೂ ಅನ್ಯಾಯ ಆಗಿಲ್ಲ, ಅಂಥ ಪ್ರಶ್ನೆಯೇ ಉದ್ಭವ ಆಗಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಭರವಸೆ ಇದೆ"ಎಂದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News