ಮಾಜಿ ಸಚಿವ ಡಿಕೆಶಿ ಆಸ್ಪತ್ರೆಗೆ ದಾಖಲು
Update: 2019-11-12 04:36 GMT
ಬೆಂಗಳೂರು, ನ.12: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಸೋಮವಾರ ಮಧ್ಯರಾತ್ರಿ ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದಕ್ಕೂ ಮೊದಲು ನ.1ರಂದು ಅಧಿಕ ರಕ್ತದೊತ್ತಡ ಮತ್ತು ಮಧುಮೇಹದ ಮಟ್ಟದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಸ್ಪತ್ರೆಗೆ ದಾಖಲಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಕಡ್ಡಾಯ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸಲಹೆ ಮಾಡಿದ್ದಾರೆ. ಆದ್ದರಿಂದ ಕನಿಷ್ಟ ಮೂರು ದಿನಗಳ ಕಾಲವಾದರೂ ಯಾರೂ ಅವರ ಭೇಟಿಗೆ ಬರಬಾರದು ಎಂದು ಶಿವಕುಮಾರ್ ಅವರ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.