ಮಲ್ಲಂದೂರು: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Update: 2019-11-12 07:28 GMT

ಚಿಕ್ಕಮಗಳೂರು, ನ.12: ದನ ಮೇಯಿಸಲು ಕಾಡಿಗೆ ತೆರಳಿದ್ದ ವ್ಯಕ್ತಿಯೋರ್ವ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ತಾಲೂಕಿನ ನಿಡಗೋಡು ಸಮೀಪದ ಮಲ್ಲಂದೂರು ಅರಣ್ಯ ವಲಯದಲ್ಲಿ ನಡೆದಿದೆ

ಮೃತರನ್ನು ರಂಗಯ್ಯ (60) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News