ಮಹಾರಾಷ್ಟ್ರ ರಾಜ್ಯಪಾಲರ ನಿರ್ಧಾರದ ವಿರುದ್ಧ ಸುಪ್ರೀಂ ಮೆಟ್ಟಿಲೇರಲಿರುವ ಶಿವಸೇನೆ
Update: 2019-11-12 09:50 GMT
ಮುಂಬೈ: ಸರಕಾರ ರಚಿಸಲು ಹೆಚ್ಚಿನ ಕಾಲಾವಕಾಶ ನೀಡಲು ನಿರಾಕರಿಸಿದ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಶಿವಸೇನೆ ಮುಂದಾಗಿದೆ.
ಕೇಂದ್ರ ಸಂಪುಟದಿಂದ ಶಿವಸೇನೆಯ ಅರವಿಂದ್ ಸಾವಂತ್ ಹೊರಬಂದ ನಂತರ ಪಕ್ಷವು ಸರಕಾರ ಸ್ಥಾಪನೆಗೆ ಎನ್ ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳ ಬೆಂಬಲವನ್ನು ನಿರೀಕ್ಷಿಸಿತ್ತು. ಈ ಹಿನ್ನೆಲೆಯಲ್ಲಿ ಆದಿತ್ಯ ಠಾಕ್ರೆ ನೇತೃತ್ವದಲ್ಲಿ ಪಕ್ಷದ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ 24 ಗಂಟೆಗಳ ಕಾಲ ಕಾಲಾವಕಾಶ ನೀಡಬೇಕೆಂದು ಕೇಳಿಕೊಂಡಿದ್ದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ರಾಜ್ಯಪಾಲರು ಸರಕಾರ ರಚನೆಗೆ ಎನ್ ಸಿಪಿಗೆ ಆಹ್ವಾನ ನೀಡಿದ್ದಾರೆ.