ಪ್ರತ್ಯೇಕ ಪ್ರಕರಣ: ಮೂವರು ಆತ್ಮಹತ್ಯೆ
Update: 2019-11-12 17:16 GMT
ಕುಂದಾಪುರ, ನ.12: ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಕೋಟೇಶ್ವರ ಗ್ರಾಮದ ಮಾರ್ಕೊಡು ನಿವಾಸಿ ದಯಾನಂದ ಮೊಗವೀರ(55) ಎಂಬವರು ನನ್ನ ಸಾವಿಗೆ ನಾನೇ ಕಾರಣ ಎಂಬುದಾಗಿ ಮರಣ ಪತ್ರ ಬರೆದಿಟ್ಟು ಮನೆಯ ಹಾಲ್ನಲ್ಲಿ ನ.11ರಂದು ಸಂಜೆ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ವಿಪರೀತ ಮದ್ಯ ಸೇವನೆ ಹಾಗೂ ಉಬ್ಬಸ ಖಾಯಿಲೆಯಿಂದ ಬಳಲುತ್ತಿದ್ದ ನಡೂರು ನಿವಾಸಿ ಭಾಸ್ಕರ ಶೆಟ್ಟಿ(55) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನ.11ರಂದು ರಾತ್ರಿ ವೇಳೆ ಮನೆಯ ಸಮೀಪದ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ನೀಲಾವರ ದೇವಾಡಿಗರಬೆಟ್ಟು ನಿವಾಸಿ ಲಕ್ಷ್ಮೀ ದೇವಾಡಿಗ(78) ಎಂಬವರು ಅನಾರೋಗ್ಯದಿಂದ ಮಾನಸಿಕವಾಗಿ ನೊಂದು ನ.12ರಂದು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.