ನಾನು ಉಪ ಚುನಾವಣೆಯ ಟಿಕೆಟ್ ಆಕಾಂಕ್ಷಿಯಲ್ಲ: ಮಾಜಿ ಸಚಿವ ಎಂ.ಆರ್.ಸೀತಾರಾಂ

Update: 2019-11-13 18:14 GMT

ಬೆಂಗಳೂರು, ನ.13: ನಾನು ಈ ಬಾರಿಯ ಉಪಚುನಾವಣಾ ಟಿಕೆಟ್ ಆಕಾಂಕ್ಷಿ ಎಂಬ ಸುದ್ದಿಯು ಕೆಲವು ಮಾಧ್ಯಮದಲ್ಲಿ ಪ್ರಕಟವಾಗಿದ್ದು, ಈ ಸುದ್ದಿ ಸತ್ಯಕ್ಕೆ ದೂರವಾಗಿರುವಂತದ್ದು ಎಂದು ಕಾಂಗ್ರೆಸ್ ನ ಮಾಜಿ ಸಚಿವ ಎಂ.ಆರ್.ಸೀತಾರಾಂ ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಈ ಉಪಚುನಾವಣೆಯಲ್ಲಿ ಯಾವುದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಲ್ಲ ಮತ್ತು ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ನಾನು ಸದಾ ಬದ್ಧನಾಗಿರುತ್ತೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News