ಜಾರ್ಖಂಡ್ ಕಾಂಗ್ರೆಸ್ ಸಿಎಂ ಅಭ್ಯರ್ಥಿಯಾಗಿ ಗೌರವ್ ವಲ್ಲಭ್ ?

Update: 2019-11-14 04:01 GMT
Photo: Twitter

ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗೌರವ್ ವಲ್ಲಭ್ ಅವರನ್ನು ಆರಿಸುವ ಸಾಧ್ಯತೆಯಿದೆ. ಜಮ್ಶೆದ್‍ಪುರದ ಎಕ್ಸ್ ಎಲ್‍ ಆರ್ ಐ ಮ್ಯಾನೇಜ್ಮೆಂಟ್ ಇನ್‍ಸ್ಟಿಟ್ಯೂಟ್ ಇಲ್ಲಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದ ಅವರು ಕ್ರೆಡಿಟ್ ರಿಸ್ಕ್ ಮ್ಯಾನೇಜ್ಮೆಂಟ್‍ನಲ್ಲಿ ಡಾಕ್ಟರೇಟ್ ಪದವಿ ಹೊಂದಿದ್ದಾರೆ. ಹಲವಾರು ಕೃತಿಗಳನ್ನೂ ಅವರು ಬರೆದಿದ್ದಾರೆ.

ಶೈಕ್ಷಣಿಕ ತಜ್ಞರ ಕುಟುಂಬದಿಂದ ಬಂದವರಾದ ಗೌರವ್ ರಾಜಕೀಯ ಪ್ರವೇಶಿಸಿರುವ ಅವರ ಕುಟುಂಬದ ಮೊದಲಿಗರಾಗಿದ್ದಾರೆ. ಜನವರಿ ತಿಂಗಳಲ್ಲಿ ಅವರನ್ನು ಕಾಂಗ್ರೆಸ್ ಪಕ್ಷದ ಹತ್ತು ಮಂದಿ ವಕ್ತಾರರಲ್ಲಿ ಒಬ್ಬರನ್ನಾಗಿ ಆರಿಸಲಾಗಿತ್ತು. ಬಿಜೆಪಿಯ ವಕ್ತಾರ ಸಂಬಿತ್ ಪಾತ್ರಾ ಅವರಿಗೆ ತಕ್ಕ ಪ್ರತ್ಯುತ್ತರ ನೀಡಬಲ್ಲ ಸಾಮಥ್ರ್ಯ ಹೊಂದಿದ್ದರಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಗೌರವ್ ಪ್ರಮುಖ ಸ್ಥಾನ ಗಳಿಸುವಲ್ಲಿ ಸಫಲರಾಗಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆ ಐದು ಹಂತಗಳಲ್ಲಿ ನವೆಂಬರ್ 30ರಿಂದ ಡಿಸೆಂಬರ್ 20ರ ತನಕ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News