ಬೈಕ್ ಕಳವು ಪ್ರಕರಣ: ಮೂವರ ಬಂಧನ

Update: 2019-11-14 14:01 GMT

ಬೆಂಗಳೂರು, ನ.14: ಬೈಕ್ ಕಳವು ಪ್ರಕರಣ ಸಂಬಂಧ ಮೂವರನ್ನು ಇಲ್ಲಿನ ನಂದಿನಿ ಲೇಔಟ್ ಠಾಣಾ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಕೋರಮಂಗಲದ ಚಂದ್ರಕಾಂತ (23), ಕೆಂಗೇರಿಯ ಸಂಜೀವ್(26), ನಂದಕುಮಾರ್(25) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಮೇಲೆ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿದ್ದು, ಇವರಿಂದ 2.30 ಲಕ್ಷ ರೂ. ಮೌಲ್ಯದ ನಾಲ್ಕು ಬೈಕ್‌ಗಳನ್ನು ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News