ಅಂಬೇಡ್ಕರ್ಗೆ ಅವಮಾನ; ನ.15ರಂದು ದಸಂಸ ಪ್ರತಿಭಟನೆ
Update: 2019-11-14 15:48 GMT
ಉಡುಪಿ, ನ.14: ಭಾರತರತ್ನ ಸಂವಿಧಾನಶಿಲ್ಪಿಬಾಬಾ ಸಾಹೇಬ ಅಂಬೇಡ್ಕರ್ ಅವರು ಸಂವಿಧಾನ ಬರೆದಿಲ್ಲ ಎಂದು ಅವಮಾನಿಸಿರುವ ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಕೋಮುವಾದಿ ಉಮಾಶಂಕರ್ ಹಾಗೂ ಶಿಕ್ಷಣ ಇಲಾಖೆಯನ್ನು ಕೇಸರೀಕರಣ ಮಾಡಲು ಹುನ್ನಾರ ನಡೆಸುತ್ತಿರುವ ಸರಕಾರದ ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ವಾದ) ಉಡುಪಿ ಜಿಲ್ಲೆ ಹಾಗೂ ವಿವಿಧ ಸಂಘಟನೆಗಳು ಸಂಯುಕ್ತವಾಗಿ ನ.15ರಂದು ಬೆಳಗ್ಗೆ 11 ಗಂಟೆಗೆ ಅಜ್ಜರಕಾಡು ಹುತಾತ್ಮರ ಸ್ಮಾರಕ ಬಳಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿವೆ ಎಂದು ಜಿಲ್ಲಾ ಸಮಿತಿ ಪ್ರಕಟಣೆ ತಿಳಿಸಿದೆ.