ಸಾಮಾಜಿಕ ಜಾಲತಾಣದಲ್ಲಿ ಅಂಬೇಡ್ಕರ್ಗೆ ಅಪಮಾನ ಆರೋಪ: ಯುವಕನ ಬಂಧನ
Update: 2019-11-14 16:16 GMT
ಕಲಬುರ್ಗಿ, ನ.14: ಸಾಮಾಜಿಕ ಜಾಲತಾಣ ವಾಟ್ಸ್ ಆ್ಯಪ್ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಇಲ್ಲಿಮ ವಾಡಿ ಠಾಣಾ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಸುಗೂರು ಗ್ರಾಮದ ಶರಣಪ್ಪ ನಾಯ್ಕೋಡಿ ಎಂಬಾತ ಬಂಧಿತ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.
ಅಂಬೇಡ್ಕರ್ ಅವರಿಗೆ ಅವಮಾನ ಆಗುವ ರೀತಿಯಲ್ಲಿ ಭಾವಚಿತ್ರ ಸೃಷ್ಟಿಸಿ ಅದನ್ನು ತನ್ನ ವಾಟ್ಸ್ ಆ್ಯಪ್ ಸ್ಟೇಟಸ್ನಲ್ಲಿ ಹಾಕಿದ್ದ ಎಂದು ಆರೋಪಿಸಿ ದಲಿತ ಮುಖಂಡರು ನೀಡಿರುವ ದೂರಿನ್ವಯ ಯುವಕನನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.