ಅಪರಾಧ ಪ್ರಕರಣಗಳ ಜಾಮೀನಿಗೆ ನಕಲಿ ದಾಖಲೆ ಸಲ್ಲಿಕೆ ಆರೋಪ: ನಾಲ್ವರ ಬಂಧನ

Update: 2019-11-14 18:17 GMT

ಬೆಂಗಳೂರು, ನ.14: ಅಪರಾಧ ಪ್ರಕರಣಗಳ ಸಂಬಂಧ ಆರೋಪಿಗಳಿಗೆ ನಕಲಿ ದಾಖಲೆ ಪತ್ರ ಒದಗಿಸಿ, ಜಾಮೀನಿಗೆ ಸಹಾಯ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಸವ ಕುಮಾರ್, ರಮಾದೇವಿ, ಮಧುಕುಮಾರ್ ಹಾಗೂ ರತ್ನಮ್ಮ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸುಮಾರು 200 ಮಂದಿಗೆ ನಕಲಿ ದಾಖಲೆ ಪತ್ರಗಳನ್ನು ನೀಡಿ, ಜಾಮೀನು ಪಡೆದುಕೊಳ್ಳಲು ಸಹಾಯ ಮಾಡಿದ್ದರು. ಅಲ್ಲದೆ, ಜಾಮೀನು ಪಡೆದ ಆರೋಪಿಗಳು ವಿಚಾರಣೆಗೆ ಹಾಜರಾಗದೆ, ತಲೆಮರೆಸಿಕೊಳ್ಳುತ್ತಿದ್ದರು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಬಂಧಿತರಿಂದ ಆಧಾರ್ ಕಾರ್ಡ್, ಗ್ರಾಮ ಲೆಕ್ಕಿಗರ ಮುದ್ರೆ, ನಕಲಿ ಭೂ ದಾಖಲೆಗಳನ್ನು ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News