ಬೆಂಗಳೂರು: ಚಾಲಕನ ಕೊಲೆಗೈದು ಗೋಣಿ ಚೀಲದಲ್ಲಿ ಕಟ್ಟಿ ಎಸೆದರು !

Update: 2019-11-15 13:42 GMT

ಬೆಂಗಳೂರು, ನ.15: ಕಾರು ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆಗೈದ ದುಷ್ಕರ್ಮಿಗಳು, ಗೋಣಿ ಚೀಲದಲ್ಲಿ ಮೂಟೆ ಕಟ್ಟಿ ಎಸೆದು ಪರಾರಿಯಾಗಿರುವ ಘಟನೆ ಇಲ್ಲಿನ ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲಗ್ಗೆರೆಯ ರಾಜೀವ್‌ ಗಾಂಧಿ ನಗರದ ಸಂತೋಷ್(30) ಮೃತ ಕಾರು ಚಾಲಕ ಎಂದು ತಿಳಿದುಬಂದಿದೆ.

ಕಳೆದ ವರ್ಷ ಯಮುನಾ ಎಂಬಾಕೆಯನ್ನು ವಿವಾಹವಾಗಿದ್ದ ಸಂತೋಷ್, ಸರಿಯಾಗಿ ಕೆಲಸಕ್ಕೆ ಹೋಗದೆ ಮನೆಯಲ್ಲಿದ್ದ ಎನ್ನಲಾಗಿದೆ. ಗುರುವಾರ ರಾತ್ರಿ ಮನೆಯಿಂದ ಹೊರಗಡೆ ಹೋಗಿದ್ದ ವೇಳೆ, ದುಷ್ಕರ್ಮಿಗಳ ತಂಡ ಇವರ ಮೇಲೆ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದೆ ಎನ್ನಲಾಗಿದೆ.

ಸಂತೋಷ್ ಅವರನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆನ್ನುವುದು ಸದ್ಯಕ್ಕೆ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿರುವ ನಂದಿನಿ ಲೇಔಟ್ ಪೊಲೀಸರು ಆರೋಪಿಗಳ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News