ನಿವೃತ್ತ ಐಎಎಸ್ ಅಧಿಕಾರಿ ಮನೆಯಲ್ಲಿ ಕಳವು

Update: 2019-11-15 16:23 GMT

ಬೆಂಗಳೂರು, ನ.15: ನಿದ್ರೆ ಔಷಧಿ ನೀಡಿ, ನಿವೃತ್ತ ಐಎಎಸ್ ಅಧಿಕಾರಿ ಮನೆಯಲ್ಲಿ ಕಳವು ಮಾಡಿರುವ ಘಟನೆ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮೇಶ್ವರ್, ಇಲ್ಲಿನ ಬಸವೇಶ್ವರ ನಗರದ ವ್ಯಾಪ್ತಿಯ ಮನೆಯಲ್ಲಿ ನೆಲೆಸಿದ್ದರು. ಆದರೆ, ಮನೆಯ ಭದ್ರತಾ ಸಿಬ್ಬಂದಿ ಬಹದ್ದೂರ್ ಎಂಬಾತ ರಾತ್ರಿ ವೇಳೆ ಸೋಮೇಶ್ವರ್ ಅವರಿಗೆ ನಿದ್ರೆ ಮಾತ್ರೆ ನೀಡುತ್ತಿದ್ದ. ಇದರಿಂದ ಪ್ರಜ್ಞೆ ತಪ್ಪಿಸಿ, ಮನೆಯಲ್ಲಿದ್ದ ಚಿನ್ನಾಭರಣ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕದ್ದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

ಸದ್ಯ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News