ನ. 26: ಮುನ್ನೂರು ಗ್ರಾಪಂ ವಿವಿಧ ಕಾರ್ಯಕ್ರಮ ಉದ್ಘಾಟನೆ

Update: 2019-11-16 15:34 GMT

ಮಂಗಳೂರು, ನ.16: ಮಂಗಳೂರು ತಾಲೂಕಿನ ಮುನ್ನೂರು ಗ್ರಾಪಂನ ಸುಭಾಷ್‌ನಗರದ ಸಮುದಾಯ ಭವನದಲ್ಲಿ ನ.26ರಂದು ಬೆಳಗ್ಗೆ 10:30ಕ್ಕೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.

ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುನ್ನೂರು ಗ್ರಾಮ ಮಟ್ಟದ ಉದ್ಯೋಗ ವಿನಿಮಯ ಕೇಂದ್ರಕ್ಕೆ ಚಾಲನೆ ಮತ್ತು ನಗದು ರಹಿತ ವ್ಯವಹಾರಕ್ಕೆ ಚಾಲನೆ ನೀಡಲಿದ್ದಾರೆ.

ಲೋಕಸಭಾ ಸದಸ್ಯ ನಳಿನ್‌ಕುಮಾರ್ ಕಟೀಲ್ ಸಾರ್ವಜನಿಕ ಶೌಚಾಲಯ ಹಾಗೂ ಪಂಚಾಯತ್ ಆವರಣದ ಇಂಟರ್‌ಲಾಕ್ ಉದ್ಘಾಟಿಸಲಿದ್ದಾರೆ.

ಮಂಗಳೂರು ವಿಧಾನಸಭಾ ಶಾಸಕ ಯು.ಟಿ. ಖಾದರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ.ಜಾತಿ/ಪ.ಪಂಗಡ ಫಲಾನುಭವಿ ಗಳಿಗೆ ಕುಡಿಯುವ ನೀರಿನ ಟ್ಯಾಂಕ್ ವಿತರಣೆ ಮತ್ತು ಮದನಿನಗರ ಅಂಗನವಾಡಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News