ಭೀಕರ ರಸ್ತೆ ಅಪಘಾತಕ್ಕೆ ಯುವಕ ಬಲಿ, ಯುವತಿಯ ಸ್ಥಿತಿ ಗಂಭೀರ

Update: 2019-11-16 16:26 GMT

ಚಾಮರಾಜನಗರ, ನ.16: ಟಿಪ್ಪರ್ ಗೆ ಹಿಂಬದಿಯಿಂದ ಬೈಕ್ ಢಿಕ್ಕಿಯಾದ ಪರಿಣಾಮ ಯುವಕ ಮೃತಪಟ್ಟು, ಯುವತಿ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದಲ್ಲಿ ಶನಿವಾರ ರಾತ್ರಿ ನಡೆದಿದೆ.

ಬೈಕ್ ನಲ್ಲಿದ್ದವರು ಅಣ್ಣ-ತಂಗಿ ಆಗಿದ್ದು, ಮೃತನನ್ನು ಚಾಮರಾಜನಗರ ತಾಲೂಕಿನ ಕಾಳನ ಹುಂಡಿ ಗ್ರಾಮದ ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದೆ. ಆತನ ತಂಗಿ ಮಣಿ ಗಂಭೀರ ಗಾಯಗೊಂಡು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾಳೆ.

ಟಿಪ್ಪರ್ ಗೆ ಹಿಂಬದಿಯಿಂದ ವೇಗವಾಗಿ ಬಂದು ಬೈಕ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ‌ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಚಾಮರಾಜನಗರ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಚಾಮರಾಜನಗರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News