ಕೋಲಾರ: ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

Update: 2019-11-16 18:14 GMT

ಕೋಲಾರ, ನ.16: ನಾಲ್ಕು ದಿನದ ಹಿಂದೆ ಕಾಲು ಜಾರಿ ಬಿದ್ದು ತಲೆಗೆ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗಲ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲಾರ ತಾಲೂಕು ಮಾದವಗುರ್ಜೇನಳ್ಳಿ ಗ್ರಾಮದ ಮುನಿವೆಂಕಟಸ್ವಾಮಿ(45) ಮೃತ ವ್ಯಕ್ತಿ. ನಾಲ್ಕು ದಿನಗಳ ಹಿಂದೆ ಕಾಲು ಜಾರಿ ಬಿದ್ದು ಗಾಯಗೊಂಡಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮುನಿವೆಂಕಟಸ್ವಾಮಿ ಸಾವಿಗೆ ವೈದ್ಯರ‌ ನಿರ್ಲಕ್ಷ್ಯವೇ ಕಾರಣ ಎಂದು ಮೃತ ರೋಗಿಯ‌ ಸಂಬಂಧಿಗಳು ಹಾಗೂ ಅಂಬೇಡ್ಕರ್ ಸೇವಾ ಸಮಿತಿ ಕಾರ್ಯಕರ್ತರು ಆರೋಪಿಸಿದ್ದು, ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ, ಬಾಕಿ ಹಣ ನೀಡುವವರೆಗೂ ಶವ ನೀಡುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News