ಉಪಚುನಾವಣೆ: ಯಶವಂತಪುರ ಕ್ಷೇತ್ರದ 'ಕೈ' ಅಭ್ಯರ್ಥಿ ಹೆಸರು ಫೈನಲ್

Update: 2019-11-17 13:52 GMT

ಬೆಂಗಳೂರು, ನ.16: ಅನರ್ಹ ಶಾಸಕರ 15 ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಎರಡು ಹಂತದಲ್ಲಿ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್, ಬಾಕಿ ಉಳಿದಿದ್ದ ಯಶವಂತಪುರ ಕ್ಷೇತ್ರದ ಅಭ್ಯರ್ಥಿಯನ್ನು ಇಂದು ಫೈನಲ್ ಮಾಡಿದೆ.

ಪಿ.ನಾಗರಾಜ್ ಅವರನ್ನು ಯಶವಂತಪುರ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಕಣಕ್ಕಿಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಅನರ್ಹ ಶಾಸಕ ಎಸ್.ಟಿ. ಸೋಮಶೇಖರ್ ಕಣದಲ್ಲಿದ್ದಾರೆ.

ಕಾಂಗ್ರೆಸ್ ಮೊದಲ ಹಂತದಲ್ಲಿ 8 ಮತ್ತು ಎರಡನೇ ಹಂತದಲ್ಲಿ 6 ಅಭ್ಯರ್ಥಿಗಳನ್ನು ಘೋಷಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News