ಪಕ್ಷಾಂತರಿಗಳನ್ನು ಸೋಲಿಸಲು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ: ವಾಟಾಳ್ ನಾಗರಾಜ್

Update: 2019-11-17 16:15 GMT

ಮೈಸೂರು,ನ.17: ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಇಂತಹ ಅಭ್ಯರ್ಥಿಗಳನ್ನು ಜನ ಸೋಲಿಸಬೇಕು. ಪ್ರತಿ ಕ್ಷೇತ್ರಕ್ಕೆ ಹೋಗಿ ಅವರ ವಿರುದ್ಧ ಪ್ರಚಾರ ಮಾಡುತ್ತೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು.

ರವಿವಾರ ರೈಲ್ವೇ ನಿಲ್ದಾಣ ಮುಂಭಾಗ ಕಪ್ಪು ಬಟ್ಟೆ ಪ್ರದರ್ಶಿಸಿ ಪಕ್ಷಾಂತರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ನಾನು ಮಹಾಲಕ್ಷಿ ಲೇಔಟ್ ಹಾಗೂ ಶಿವಾಜಿ ನಗರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ. ಇನ್ನುಳಿದ ಕ್ಷೇತ್ರಗಳಲ್ಲಿ ಪಕ್ಷಾಂತರಿಗಳ ವಿರುದ್ಧ ಪ್ರಚಾರ ಮಾಡುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆ ಬೇಕಿಲ್ಲ. ಭ್ರಷ್ಟಾಚಾರ ಒಂದೇ ಅವರ ನೀತಿಯಾಗಿದೆ ಎಂದು ದೂರಿದರು.

ಯಡಿಯೂರಪ್ಪನವರ ಸ್ಥಿತಿ ಭಸ್ಮಾಸುರನ ಸ್ಥಿತಿಯಾಗುತ್ತದೆ. ಯಡಿಯೂರಪ್ಪ ಅಂದ್ರೆ ಎಡವಟ್ಟು, ಎಡವಟ್ಟು ಅಂದ್ರೆ ಯಡಿಯೂರಪ್ಪ ಎಂದು
ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News