ಬಂಟ್ವಾಳ: ರಸ್ತೆ ಅಪಘಾತದ ಗಾಯಾಳು ಯುವಕ ಮೃತ್ಯು

Update: 2019-11-18 08:10 GMT

ಬಂಟ್ವಾಳ, ನ.18: ಸರಣಿ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ನರಿಕೊಂಬು ಗ್ರಾಮದ ಪಿತ್ತಿಲಗುಡ್ಡೆ ನಿವಾಸಿ ಯೂಸುಫ್ ಎಂಬವರ ಪುತ್ರ ಫರಾಝ್ (22) ಮೃತರು ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಣೆಮಂಗಳೂರು ಕಡೆಯಿಂದ ಬಿ.ಸಿ.ರೋಡು ಕಡೆಗೆ ತೆರಳುತ್ತಿದ್ದಾಗ ಪಿಕಪ್ ವಾಹನ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿತ್ತು. ಬಳಿಕ ಮುಂದಕ್ಕೆ ಚಲಿಸಿದ ದ್ವಿಚಕ್ರವಾಹನ ಇನ್ನೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿತ್ತು. ಪರಿಣಾಮ ದ್ವಿಚಕ್ರ ವಾಹನ ಸವಾರ ಫವಾಝ್ ಅವರ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ತಕ್ಷಣ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.

ಈ ಸಂಬಂಧ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News