ಕಲ್ಲಡ್ಕ: ಬಸ್ ಢಿಕ್ಕಿ-ಪಾದಚಾರಿಗೆ ಗಾಯ

Update: 2019-11-18 11:47 GMT

ಬಂಟ್ವಾಳ, ನ. 18: ಸರಕಾರಿ ಬಸ್‍ವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಕಲ್ಲಡ್ಕದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.

ಮಾಣಿ ಸಮೀಪದ ಬುಡೋಳಿ ನಿವಾಸಿ ಅಣ್ಣಿ ಪೂಜಾರಿ (65) ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಅಣ್ಣಿ ಪೂಜಾರಿ ಅವರು ಕಲ್ಲಡ್ಕದ ರಸ್ತೆ ಬದಿಯಲ್ಲಿ ನಿಂತಿದ್ದಾಗ ಸರಕಾರಿ ಬಸ್ ಢಿಕ್ಕಿಯಾಗಿದೆ. ಪರಿಣಾಮ ಗಾಯಗೊಂಡ ಇವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News