ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಇಬ್ಬರ ಕೊಲೆ

Update: 2019-11-18 12:14 GMT

ಬೆಂಗಳೂರು, ನ.18: ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರನ್ನು ಕೊಲೆಗೈದಿರುವ ಘಟನೆ ಇಲ್ಲಿನ ತಲ್ಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಗಾರೆ ಕೆಲಸಗಾರನಾದ ಸುಬ್ರಮಣಿ (35) ಹಾಗೂ ಸಂತೋಷ್ ಪಿಳೈ (33) ಕೊಲೆಯಾದ ವ್ಯಕ್ತಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಹಣದ ವಿಚಾರವಾಗಿ ಈ ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿದ್ದಾರೆ ಎನ್ನಲಾಗಿದ್ದು, ಘಟನೆ ಸಂಬಂಧ ಮಹೇಂದ್ರ ಎಂಬಾತನನ್ನು ವಶಕ್ಕೆ ಪಡೆದಿರುವ ತಲಘಟ್ಟಪುರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News