ನ.19ರಂದು ಉಡುಪಿಯಲ್ಲಿ ಸಂತ ಸಂಗಮ

Update: 2019-11-19 04:58 GMT

ಉಡುಪಿ, ನ.18: ಹರಿದ್ವಾರದ ಪತಂಜಲಿ ಯೋಗ ಪೀಠ ಟ್ರಸ್ಟ್‌ನ ಯೋಗಗುರು ಬಾಬಾ ರಾಮ್‌ದೇವ್‌ರಿಂದ ನಡೆದಿರುವ ಐದು ದಿನಗಳ ಯೋಗ ಶಿಬಿರದ ನಾಲ್ಕನೇ ದಿನವಾದ ನ.19ರ ಸಂಜೆ 4 ಗಂಟೆಗೆ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥರ ಅಧ್ಯಕ್ಷತೆಯಲ್ಲಿ ಹತ್ತಕ್ಕೂ ಅಧಿಕ ಮಠಾಧೀಶರು ಹಾಗೂ ಸಾಧುಸಂತರ ಉಪಸ್ಥಿತಿಯಲ್ಲಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಸಂತ ಸಂಗಮ’ ನಡೆಯಲಿದೆ.

ಸಂತ ಸಂಗಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಸ್ವಾಮೀಜಿ. ಬಾಳೆಗಾರು ಮಠದ ಶ್ರೀ ರಘುಭೂಷಣ ತೀರ್ಥ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ, ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭತೀರ್ಥ ಸ್ವಾಮೀಜಿ.

ತೀರ್ಥಹಳ್ಳಿ ಭೀಮನಕಟ್ಟೆ ಮಠದ ಶ್ರೀರಘುವರೇಂದ್ರ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಕಿರಿಯ ಯತಿ ಶ್ರೀವಿದ್ಯಾರಾಜೇಶ್ವರತೀರ್ಥ ಸ್ವಾಮೀಜಿ, ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ, ಶ್ರೀಕ್ಷೇತ್ರ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಉಜಿರೆ ಶ್ರೀರಾಮಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ, ಬೊಲ್ಯೊಟ್ಟು ಹೊಸ್ಮಾರಿನ ಶ್ರೀ ವಿಖ್ಯಾತಾ ನಂದ ಸ್ವಾಮೀಜಿ, ಮೂಡಬಿದ್ರೆ  ಮಠದ ಸ್ವಸ್ತಿ ಶ್ರೀಚಾರುಕೀರ್ತಿ ಭಟ್ಟಾರಕವರ್ಯ ಸ್ವಾಮೀಜಿ, ಕಟಪಾಡಿ ಆನೆಗುಂದಿ ಸರಸ್ವತಿ ಪೀಠದ ಶ್ರೀಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ, ಗುರುಪುರ ಶ್ರೀವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ, ಮೂಡಬಿದ್ರೆ ಶ್ರೀಸತ್ಯನಾರಾಯಣ ಕ್ಷೇತ್ರ ಕರಿಂಜದ ಶ್ರೀಮುಕ್ತಾನಂದ ಸ್ವಾಮೀಜಿ, ಮಂಜೇಶ್ವರ ಕೊಂಡೆವೂರು ಶ್ರೀಯೋಗಾನಂದ ಸರಸ್ವತೀ ಸ್ವಾಮೀಜಿ ಹಾಗೂ ಶ್ರೀಕ್ಷೇತ್ರ ಕದ್ರಿಯ ನಿರ್ಮಲ ನಾಥ್‌ಜೀ ಸ್ವಾಮೀಜಿ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಮೊದಲು ಈ ಎಲ್ಲ ಸಾಧು ಸಂತರನ್ನು ಮೆರವಣಿಗೆಯಲ್ಲಿ ಕರೆತರಲಾಗುವುದು ಎಂದು ಪರ್ಯಾಯ ಪಲಿಮಾರು ಹಾಗೂ ಪತಂಜಲಿ ಯೋಗ ಶಿಬಿರ ಸಮಿತಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News