ಐವನ್ಗೆ ಉಪಚುನಾವಣೆಯ ಉಸ್ತುವಾರಿ
Update: 2019-11-18 14:35 GMT
ಮಂಗಳೂರು, ನ.18: ರಾಜ್ಯದ ಉಪಚುನಾವಣೆಯಲ್ಲಿ ಶಿವಾಜಿನಗರ ಕೆ.ಆರ್.ಪುರಂ ವಿಧಾನ ಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇಮಕಗೊಳಿಸಿದ್ದಾರೆ.
ಈಗಾಗಲೇ ಐವನ್ ಕ್ಷೇತ್ರಕ್ಕೆ ತೆರಳಿ ಚುನಾವಣ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.