ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2019-11-18 16:19 GMT

ಕಾಪು, ನ.18: ವಿಪರೀತ ಶರಾಬು ಕುಡಿಯುವ ಚಟದಿಂದ ಸರಿಯಾಗಿ ಕೆಲಸಕ್ಕೆ ಹೋಗದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮುದರಂಗಡಿಯ ಜೋನ್ ಮೋಹನ್ ಸಾಲಿಯಾನ್(46) ಎಂಬವರು ನ.17ರಂದು ಮಧ್ಯಾಹ್ನ ವೇಳೆ ಮನೆಯ ಒಳಗಡೆ ಮಾಡಿನ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ:  ಅನಾರೋಗ್ಯದಿಂದ ಬಳಲುತ್ತಿದ್ದ ಯಡ್ತಾಡಿ ಗ್ರಾಮದ ಅಲ್ತಾರು ನಿವಾಸಿ ಜಯರಾಮ(51) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ನ.17ರಂದು ರಾತ್ರಿ ವೇಳೆ ಯಡ್ತಾಡಿ ಗ್ರಾಮದ ಕುಡುಬಿನ ಹಕ್ಲು ಮದಗದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರನಾರಾಯಣ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹಾಲಾಡಿಯ ವೀಣಾ ಎಂಬವರು ನ.18ರಂದು ಬೆಳಗ್ಗೆ ಹಾಲಾಡಿ ಗ್ರಾಮದ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News