ಶಾಲಾ ಮಕ್ಕಳಿಂದಲೇ ಶೌಚಾಲಯ ಶುಚಿಗೊಳಿಸಿದ ಶಿಕ್ಷಕರು: ಆರೋಪ

Update: 2019-11-18 17:14 GMT

ಚಾಮರಾಜನಗರ, ನ.18: ಶಾಲಾ ಮಕ್ಕಳಿಂದಲೇ ಶೌಚಾಲಯ ಶುಚಿ ಮಾಡಿಸಿದ್ದಾರೆನ್ನಲಾದ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ನಡೆದಿದೆ.

ಶಿಕ್ಷಣ ಸಚಿವರು ವಾಸ್ತವ್ಯ ಹೂಡುವ ಶಾಲೆಯಲ್ಲಿ ಶಿಕ್ಷಕರು ಈ ಕೆಲಸ ಮಾಡಿಸಿದ್ದಾರೆ ಎನ್ನಲಾಗಿದ್ದು, ಚರ್ಚೆಗೆ ಗ್ರಾಸವಾಗಿದೆ. 

ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಹನೂರು ತಾಲೂಕಿನ ಗೋಪಿನಾಥಂ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದು, ಇದಕ್ಕಾಗಿ ಶಾಲೆಯನ್ನು ಸಿಂಗರಿಸಲಾಗಿತ್ತು. ಇದೇ ವೇಳೆ ಶಾಲಾ ಮಕ್ಕಳಿಂದಲೇ ಶೌಚಾಲಯ ಶುಚಿ ಮಾಡಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News