ಅಪಘಾತ ರಹಿತ ಸೇವೆ ಸಲ್ಲಿಸಿದ ಚಾಲಕರಿಗೆ ಪುರಸ್ಕಾರ- ಅರ್ಜಿ ಆಹ್ವಾನ

Update: 2019-11-18 17:14 GMT

 ಮಂಗಳೂರು, ನ.18: ಮಂಗಳೂರು, ಬಂಟ್ವಾಳ ಮತ್ತು ಪುತ್ತೂರು ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ವ್ಯಾಪ್ತಿಯ ದ.ಕ. ಜಿಲ್ಲೆಯಲ್ಲಿ ಪ್ರಾಮಾಣಿಕ ಮತ್ತು ಅಪಘಾತ ರಹಿತವಾಗಿ ಸೇವೆ ಸಲ್ಲಿಸಿರುವ ಮ್ಯಾಕ್ಸಿಕ್ಯಾಬ್, ಬಸ್, ಸರಕು ಸಾಗಣೆ ವಾಹನ, ಟ್ಯಾಕ್ಸಿ ಮತ್ತು ಆಟೋರಿಕ್ಷಾದ ತಲಾ ಇಬ್ಬರು ಚಾಲಕರಂತೆ ಒಟ್ಟು 10 ಚಾಲಕರನ್ನು ಗುರುತಿಸಿ ಪುರಸ್ಕಾರವನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನ.25 ಕೊನೆಯ ದಿನವಾಗಿದೆ.

ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ಜಿಲ್ಲೆಯ ಮಂಗಳೂರು, ಬಂಟ್ವಾಳ ಅಥವಾ ಪುತ್ತೂರು ಆರ್‌ಟಿಒ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಸದಸ್ಯ ಕಾರ್ಯದರ್ಶಿ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News