ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ: ಮುಖ್ಯಮಂತ್ರಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Update: 2019-11-19 13:28 GMT

ಬೆಂಗಳೂರು, ನ.19: ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ತಮ್ಮನ್ನು ಟೀಕಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ನಾವು ಯಾವ ಕೋಮುವಾದಿ ಸಂಘಟನೆಯನ್ನು ಪೋಷಿಸಿಕೊಂಡು ಬಂದಿಲ್ಲ. ಕೋಮುವಾದಿ ಚಟುವಟಿಕೆಗಳಲ್ಲಿ ಭಾಗವಹಿಸುವ ಯಾವುದೇ ಸಂಘಟನೆಗಳಾದರೂ ಅವುಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಿ ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ, ಶಾಸಕರೊಬ್ಬರ ಮೇಲಿನ ಹಲ್ಲೆ ವಿಚಾರದಲ್ಲಿ ರಾಜಕೀಯ ದುರುದ್ದೇಶದಿಂದ ಕೂಡಿದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News