ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮುಖ್ಯಮಂತ್ರಿ ಅಭಿನಂದನೆ

Update: 2019-11-19 17:41 GMT

ಬೆಂಗಳೂರು, ನ.19: ಕೇಂದ್ರ ಆರೋಗ್ಯ ಸಚಿವಾಲಯ ಮಾದರಿ ನೋಂದಣಿ ವ್ಯವಸ್ಥೆಯ ವರದಿಯಲ್ಲಿ ಉಲ್ಲೇಖಿಸಿರುವಂತೆ ರಾಜ್ಯದಲ್ಲಿ ಹೆರಿಗೆ ವೇಳೆ ತಾಯಂದಿರು ಸಾಯುವ ಪ್ರಮಾಣ ಶೇ.10ರಷ್ಟು ಇಳಿಕೆಯಾಗಿದ್ದು, ಕರ್ನಾಟಕಕ್ಕೆ ಮೊದಲ ಸ್ಥಾನ ಸಿಕ್ಕಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಕ್ಕಳು ದೇಶದ ಭವಿಷ್ಯ. ಆ ಭವಿಷ್ಯದ ಭದ್ರಬುನಾದಿ ಹಾಕುವುದು ತಾಯಂದಿರು. ಅಂತಹ ತಾಯಂದಿರ ಸುರಕ್ಷತೆ ನಮ್ಮ ಜವಾಬ್ದಾರಿ. ವಿವಿಧ ಆರೋಗ್ಯ ಕಾರ್ಯಕ್ರಮಗಳಿಂದಾಗಿ, ಪ್ರಸವದ ಸಮಯ ತಾಯಂದಿರ ಮರಣದ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಈ ಸಾಧನೆ ಮಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News