ಚಾಮರಾಜನಗರ: ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿ

Update: 2019-11-20 09:35 GMT

ಚಾಮರಾಜನಗರ: ಲಾರಿ ಮತ್ತು ಟಿವಿಎಸ್‌‌ಎಕ್ಸ್ ನಡುವೆ ಮುಖಾಮುಖಿ ಢಿಕ್ಕಿಯಿಂದ ಉಂಟಾದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಸಮೀಪ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಸಮೀಪದ ಮೇಲುಕಾಮನಹಳ್ಳಿ ಬಳಿ ಡಬ್ಬಲ್ ರಸ್ತೆ ಹತ್ತಿರ ಈ ಅಪಘಾತ ಸಂಭವಿಸಿದೆ.

ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ  ಕಾಳಪ್ಪ (60) ಶಿವಪ್ಪ (67) ಹಾಗೂ ಲಾರಿ ಚಾಲಕ ಮೃತರು ಎಂದು ಗುರುತಿಸಲಾಗಿದೆ. ಲಾರಿ ಕ್ಲೀನರ್ ಗೆ ತೀವ್ರ ಗಾಯವಾಗದ್ದು, ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಊಟಿಯಿಂದ ಮೈಸೂರಿಗೆ ತೆರಳುತ್ತಿದ್ದ ಶೀಟ್ ತುಂಬಿದ ಲಾರಿ ಅಪಘಾತದಿಂದ ಪಲ್ಟಿಯಾಗಿ ಸಂಪೂರ್ಣ ಜಖಂಗೊಂಡಿದೆ. ಈ ಸ್ಥಳದಲ್ಲಿ ಹಲವು ಅಪಘಾತ ಸಂಭವಿಸಿದ್ದರೂ ಪೋಲಿಸ್ ಇಲಾಖೆ, ಲೋಕೋಪಯೋಗಿ ಇಲಾಖೆ ಯಾವುದೇ ಸೂಚನೆ ಫಲಕ ಅಳವಡಿಸದೇ ಇರುವುದೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.

ಘಟನಾ ಸ್ದಳಕ್ಕೆ ಡಿ.ವೈ.ಎಸ್.ಪಿ. ಮೋಹನ ಭೇಟಿ ನೀಡಿ ಪರಿಶೀಲಿಸಿದರು. ಈ ಬಗ್ಗೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News