ನ್ಯಾ.ಭೀಮಣ್ಣಗೌಡ ಪಾಟೀಲ್ ನೂತನ ಉಪ ಲೋಕಾಯುಕ್ತ
Update: 2019-11-20 14:51 GMT
ಬೆಂಗಳೂರು, ನ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿಫಾರಸ್ಸಿನ ಹಿನ್ನೆಲೆಯಲ್ಲಿ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಭೀಮಣ್ಣಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ನುತನ ಉಪ ಲೋಕಾಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಬುಧವಾರ ಆದೇಶ ಹೊರಡಿಸಿದ್ದಾರೆ.
ರಾಜ್ಯ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆಯ ಸ್ಪೀಕರ್, ವಿಧಾನಪರಿಷತ್ತಿನ ಸಭಾಪತಿ, ಹಾಗೂ ಉಭಯ ಸದನಗಳ ವಿರೋಧ ಪಕ್ಷಗಳ ನಾಯಕರ ಜೊತೆ ಸಮಾಲೋಚನೆ ನಡೆಸಿದ ಬಳಿಕ ನ್ಯಾ.ಭೀಮಣ್ಣಗೌಡ ಸಂಗನಗೌಡ ಪಾಟೀಲ್ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ಮುಖ್ಯಮಂತ್ರಿ ಶಿಫಾರಸ್ಸು ಮಾಡಿದ್ದರು.