ಉಡುಪಿ: 23ರಿಂದ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ವಿತರಣೆ : ಜಿಲ್ಲಾಧಿಕಾರಿ ಜಿ.ಜಗದೀಶ್

Update: 2019-11-20 15:28 GMT

ಉಡುಪಿ, ನ. 20: ಉಡುಪಿ ಜಿಲ್ಲೆಯಲ್ಲಿ ನ.23ರಿಂದ ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ/ಅಭಿವೃದ್ದಿ ಕಾಮಗಾರಿ ಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಮರಳು ಅವಶ್ಯಕತೆ ಇರುವವರು ಆನ್‌ಲೈನ್ ( UDUPI E SAND APP) ಮೂಲಕ ಮರಳು ಖರೀದಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ನ. 23ರ ಬೆಳಗ್ಗೆ 10 ಗಂಟೆಗೆ ಇ-ಸ್ಯಾಂಡ್ ಆ್ಯಪ್ ಮೂಲಕ ಮರಳು ವಿತರಣೆ ಆರಂಭವಾಗಲಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯ ಬಜೆ ಅಣೆಕಟ್ಟಿನಲ್ಲಿ ಹೂಳೆತ್ತುವ ಕಾರ್ಯ ಪ್ರಗತಿ ಯಲ್ಲಿದ್ದು, ಈ ಹೂಳಿನಲ್ಲಿ ದೊರಕುವ ಮರಳನ್ನು ಸಾರ್ವಜನಿಕರಿಗೆ /ಅಭಿವೃದ್ದಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಪೂರೈಸಲು ಜಿಲ್ಲಾ ಮರಳು ಉಸ್ತುವಾರಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ.

ಈ ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನಗಳನ್ನು ಉಡುಪಿ ಇ-ಸ್ಯಾಂಡ್ ಆ್ಯಪ್‌ನಲ್ಲಿ ನೊಂದಾಯಿಸಿ ಕೊಳ್ಳಲು ಈಗಾಗಲೇ ತಿಳಿಸಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಹಿರಿಯ ಭೂ ವಿಜ್ಞಾನಿಗಳ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ, ಉಡುಪಿ (ದೂ.ಸಂ:0820-2572333) ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News