ಶಾಸಕ ತನ್ವೀರ್ ಸೇಠ್ ಕೊಲೆಯತ್ನ: ದ.ಕ. ಜಿಲ್ಲಾ ಕಾಂಗ್ರೆಸ್ ಖಂಡನೆ

Update: 2019-11-21 15:42 GMT

ಮಂಗಳೂರು, ನ.21: ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಮೇಲೆ ನಡೆದ ಕೊಲೆ ಯತ್ನವನ್ನು ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯು ತೀವ್ರವಾಗಿ ಖಂಡಿಸಿದೆ.

ಜನಪ್ರತಿನಿಧಿಗಳಿಗೆ ಸಮಾಜದಲ್ಲಿ ರಕ್ಷಣೆ ಇಲ್ಲದಿರುವಾಗ ಜನಸಾಮಾನ್ಯರಿಗೆ ಹೇಗೆ ರಕ್ಷಣೆ ಸಿಗುತ್ತದೆ. ಈ ಬಗ್ಗೆ ಸರಕಾರ ಚಿಂತನೆ ನಡೆಸಬೇಕು. ತನ್ವೀರ್ ಸೇಠ್‌ರ ಹಲ್ಲೆಯ ಹಿಂದೆ ಯಾರಿದ್ದಾರೆ ಎಂದು ಕೂಲಂಕಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್‌ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News