ಕೆಲಸ ಕಳೆದುಕೊಳ್ಳುವ ಭೀತಿ: ಆತ್ಮಹತ್ಯೆಗೆ ಶರಣಾದ ಟೆಕ್ಕಿ

Update: 2019-11-21 16:22 GMT

ಹೈದರಾಬಾದ್, ನ. 21: ಕೆಲಸ ಕಳೆದುಕೊಳ್ಳುವ ಭೀತಿಯಿಂದ ಟೆಕ್ಕಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ಬುಧವಾರ ನಡೆದಿದೆ.

 24ರ ಹರೆಯದ ಹರಿಣಿ ಕಳೆದ ಎರಡು ವರ್ಷಗಳಿಂದ ಕಂಪೆನಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ರಾಯದುರ್ಗಂ ಪ್ರದೇಶದಲ್ಲಿರುವ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು. ಆದರೆ, ಆರ್ಥಿಕ ಹಿನ್ನಡೆಯಿಂದ ಕಂಪೆನಿ ಹಲವು ಉದ್ಯೋಗಿಗಳೊಂದಿಗೆ ಅವರನ್ನು ಕೂಡ ಕೆಲಸದಿಂದ ತೆಗೆದು ಹಾಕಲು ಶಾರ್ಟ್‌ಲಿಸ್ಟ್ ಮಾಡಿತ್ತು. ಶಾರ್ಟ್‌ಲಿಸ್ಟ್ ಬಗ್ಗೆ ತಿಳಿದ ಬಳಿಕ ಹರಿಣಿ ಖಿನ್ನತೆಗೆ ಒಳಗಾಗಿದ್ದರು ಹಾಗೂ ಬುಧವಾರ ಆತ್ಮಹತ್ಯೆಗೆ ಶರಣಾದರು.

 ''ಮಾಹಿತಿ ತಿಳಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿದೆವು. ಅಲ್ಲಿ ಸುಸೈಡ್ ನೋಟ್ ಪತ್ತೆಯಾಗಿದೆ. ಪತ್ರದಲ್ಲಿ ತನ್ನ ಅಂಗಾಂಗಗಳನ್ನು ದಾನ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ'' ಎಂದು ರಾಯದುರ್ಗಂ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News