ಜನವರಿ ಮೊದಲ ವಾರ ಕರಾವಳಿ ಉತ್ಸವ: ಡಿಸಿ ಸಿಂಧೂ

Update: 2019-11-21 17:14 GMT

ಮಂಗಳೂರು, ನ.21: ಮುಂದಿನ ಜನವರಿ ಮೊದಲ ವಾರದಲ್ಲಿ ಕರಾವಳಿ ಉತ್ಸವ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಕರಾವಳಿ ಉತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕರಾವಳಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಾಕರ್ಷಿಸುವಂತಾಗಬೇಕು. ಉತ್ಸವಕ್ಕೆ ಸಂಬಂಧಿಸಿದ ಉಪ ಸಮಿತಿಗಳನ್ನು ರಚಿಸಿ ಉತ್ಸವಕ್ಕೆ ಬೇಕಾದ ಯೋಜನೆಯನ್ನು ರೂಪಿಸಿಕೊಳ್ಳಲು ಸೂಚಿಸಿದರು. ಬರುವ ಸಭೆಯಲ್ಲಿ ಉಪಸಮಿತಿಯು ಕ್ರಿಯಾ ಯೋಜನೆ ತಯಾರಿಸಿ ಹಾಜರಾಗಬೇಕು. ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ. ಕರಾವಳಿ ಉತ್ಸವದ ಮುಂಗಡ ಕಾರ್ಯಗಳು ಅಚ್ಚುಕಟ್ಟಾಗಿ ನಿರ್ವಹಣೆಗೊಳ್ಳಬೇಕು ಎಂದರು.

ವಸ್ತು ಪ್ರದರ್ಶನ ವಿಷಯವಾಗಿ ಟೆಂಡರ್ ಕರೆಯಲು ಮಹಾನಗರ ಪಾಲಿಕೆಯವರಿಗೆ ಸಭೆಯಲ್ಲಿ ಸೂಚನೆ ನೀಡಲಾಯಿತು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅಜಿತ್‌ಕುಮಾರ್ ಹೆಗ್ಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News